ಮೈಸೂರಿನ 1ನೇ ಹಂತ, ಹೆಬ್ಬಾಳದ ಬಸವೇಶ್ವರ ಸಮುದಾಯ ಭವನದಲ್ಲಿ ಜೆ.ಕೆ. ಟೈರ್ಸ್ ವಿಕ್ರಾಂತ್ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ(ರಿ.) ಆಯೋಜಿಸಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆ ಹಾಗೂ ಸಂಘದ 31ನೇ ವಾರ್ಷಿಕೋತ್ಸವ ಸಮಾರಂಭಲ್ಲಿ ಪರಮಪೂಜ್ಯ ಮಹಾಸ್ವಾಮೀಜಿಯವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರು ಶ್ರೀ ಆದಿಚುಂಚನಗಿರಿ ಶಾಖಾ ಮಠ ಮೈಸೂರು, ಶ್ರೀ ಕೆ. ಹರೀಶ್ಗೌಡರವರು ಮಾನ್ಯ ಶಾಸಕರು, ಚಾಮರಾಜ ವಿಧಾನಸಭಾ ಕ್ಷೇತ್ರ, ಶ್ರೀ ಕುಮಾರ್ ಎಸ್.(ಬಾಬು) ಅಧ್ಯಕ್ಷರು, ವಿಕ್ರಾಂತ್ ಟೈರ್ ಒಕ್ಕಲಿಗರ ಸಂಘ, ವಿಕ್ರಾಂತ್ ಒಕ್ಕಲಿಗರ ಕ್ಷೇಮಾಭಿವೃದ್ಧಿ ಎಲ್ಲಾ ನೌಕರರು ಹಾಗೂ ಗಣ್ಯರು ಉಪಸ್ಥಿತರಿದ್ದರು.